ಶನಿವಾರ, ಜುಲೈ 25, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

’ಆರಾಮ್ ’ ಆಗಿ ಬರುತ್ತಿದ್ದಾನೆ ‘ಆರಾಮ್ ಅರವಿಂದ್ ಸ್ವಾಮಿ’ ! ಪೋಸ್ಟ್ ಪ್ರೊಡಕ್ಷನ್ ನಲ್ಲಿ ಅಭಿಷೇಕ್-ಅನೀಶ್ ಕಾಂಬೋ

Vishalakshi Pby Vishalakshi P
28/10/2023
in Majja Special
Reading Time: 1 min read
’ಆರಾಮ್ ’ ಆಗಿ ಬರುತ್ತಿದ್ದಾನೆ ‘ಆರಾಮ್ ಅರವಿಂದ್ ಸ್ವಾಮಿ’ ! ಪೋಸ್ಟ್ ಪ್ರೊಡಕ್ಷನ್ ನಲ್ಲಿ ಅಭಿಷೇಕ್-ಅನೀಶ್ ಕಾಂಬೋ

ಫಸ್ಟ್ ಲುಕ್ ಹಾಗೂ ಪ್ರಮೋಷನಲ್ ವಿಡಿಯೋ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಆರಾಮ್ ಅರವಿಂದ್ ಸ್ವಾಮಿ ಸಿನಿಮಾ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಸದ್ಯ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ. ಅಭಿಷೇಕ್ ಶೆಟ್ಟಿ ಹಾಗೂ ಅನೀಶ್ ತೇಜೇಶ್ವರ್ ಕಾಂಬಿನೇಷ್ ನಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ನಾಯಕಿಯರಾಗಿ ನಟಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ.

ನಟ ಅನೀಶ್ ಮಾತನಾಡಿ, ಪ್ರತಿಯೊಂದು ಅಂತ್ಯದಲ್ಲೊಂದು ಆರಂಭ ಇರುತ್ತದೆ ಎಂಬ ಹಾಗೇ ಬೆಂಕಿ ಕಲೆಕ್ಷನ್ ಎಲ್ಲಾ ನೋಡಿ ಎಂಡ್ ಪಾಯಿಂಟ್ ನಲ್ಲಿ ಇದ್ದೇನಾ ಅನಿಸಿತು. ನನ್ನಿಂದ ಪ್ರೇಕ್ಷಕರು ಬೇರೆಯದ್ದನ್ನೂ ನಿರೀಕ್ಷೆ ಮಾಡುತ್ತಿದ್ದಾರೆ ಎಂಬುವುದು ಗೊತ್ತಾಯಿತು. ನನಗೆ ಅಂತಾ ಮಾಡಿಕೊಂಡ ಸಬ್ಜೆಕ್ಟ್ ನ್ನು ನಿನಗೆ ಅಂತಾ ಹೇಳುತ್ತೇನೆ. ಆರಾಮ್ ಅರವಿಂದ್ ಸ್ವಾಮಿ ಎಂದು ಅನೌನ್ಸ್ ಮಾಡಿದ್ದೇನೆ ಎಂದು ಅಭಿಷೇಕ್ ಶೆಟ್ಟಿ ಹೇಳಿದರು. ನಿನಗೆ ಅಂತಾ ಮಾಡಿಕೊಂಡಿದ್ದನ್ನೂ ನನಗೆ ಯಾಕೆ ಹೇಳುತ್ತೀಯಾ? ಅಂದಾಗ, ಇಲ್ಲ ನಿಮಗೆ ಮಾಡುತ್ತೇನೆ ಎಂದು ಕಥೆ ಹೇಳಿದರು. ಕಥೆ ಇಷ್ಟವಾಯ್ತು 15 ನಿಮಿಷದಲ್ಲಿ ಸಿನಿಮಾ ಮಾಡೋಣಾ ಎಂದು ರೆಡಿಯಾದೆವು. ಸಿನಿಮಾ ಹುಚ್ಚಿರುವ ಎಲ್ಲರೂ ಸೇರಿ ಮಾಡಿರುವ ಸಿನಿಮಾವೇ ಆರಾಮ್ ಅರವಿಂದ್ ಸ್ವಾಮಿ ಎಂದರು.ನಟಿ ಮಿಲನಾ ನಾಗರಾಜ್ ಮಾತನಾಡಿ, ಆರಾಮ್ ಅರವಿಂದ್ ಸ್ವಾಮಿ ಸಿನಿಮಾದ ಕಥೆಯನ್ನು ಅಭಿಷೇಕ್ ಅವರು ಬಂದು ಕಥೆ ಹೇಳಿದರು. ಅನೀಶ್ ಅವರ ಜೊತೆ ಸಿನಿಮಾ ಮಾಡೋದು..ಈ ಎರಡು ನನಗೆ ಎಕ್ಸೈಟ್ ಅನಿಸಿತು. ಇಲ್ಲಿವರೆಗೂ ಮಾಡಿದ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ನನ್ನ ವಿಭಿನ್ನವಾಗಿದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿರುವ ಅನುಭವ ನನಗೆ. ನಾನು ಸಿನಿಮಾ ನೋಡಿಲ್ಲ. ಸಿನಿಮಾ ನೋಡಲು ನಾನು ಎಕ್ಸೈಟ್ ಆಗಿದ್ದಾನೆ. ಅನೀಶ್ ಅವರಿಗೆ ಈ ಕಥೆ ವಿಭಿನ್ನವಾಗಿದೆ ಅನಿಸುತ್ತದೆ. ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಲಿದೆ ಎಂದರು.

 

ನಿರ್ದೇಶಕ ಅಭಿಷೇಕ್ ಶೆಟ್ಟಿ ಮಾತನಾಡಿ, ಗುಳ್ಟು ಪ್ರೊಡ್ಯೂಸರ್ ಹಾಗೂ ಅಕೀರಾ ಸಿನಿಮಾ ಪ್ರೊಡ್ಯೂಸರ್ ಒಂದೊಳ್ಳೆ ಕಥೆ ಇದ್ದ ಹೇಳಿ ಎಂದರು. ಕಥೆ ಹೇಳಿದೆ. ಅನೀಶ್ ಅವರಿಗೆ ಕಥೆ ಹುಡುಕುತ್ತಿರುವುದು ಎಂದು ಗೊತ್ತಾಯಿತು. ನಾನು ಒಂದು ಮಾಸ್ ಕಥೆ ಮಾಡಿಕೊಂಡು ಬಂದು ಹೇಳಿದೆ. ಒಪ್ಪಿಕೊಳ್ತಾರೆ ಎಂದುಕೊಂಡಿದ್ದರು, ಅವರು ಔಟ್ ಆಫ್ ದಿ ಬಾಕ್ಸ್ ಕಥೆ ಮಾಡಲು ರೆಡಿ ಇದ್ದರು. ಆಗ ಹೇಳಿದ್ದೇ ಆರಾಮ್ ಅರವಿಂದ್ ಸ್ವಾಮಿ ಕಥೆ. ಎಲ್ಲರೂ ಬಂದು ಆರಾಮ್ ಗೆ ಇದ್ದೀಯಾ ಅಂದು ಕೇಳ್ತಾರೆ. ಯಾರಿಗೂ ನಮ್ಮ ಕಷ್ಟ ಹೇಳೋದಿಕ್ಕೆ ಆಗಲ್ಲ. ಹೇಳಿದ್ರೆ ಸಹಾಯ ಮಾಡ್ತೀಯಾ ಅನ್ನುತ್ತೇವೆ. ಅವರು ನಕ್ಕು ಸುಮ್ಮನೇ ಆಗುತ್ತಾರೆ. ಈ ಬೇಸ್ ಲೈನ್ ಮೇಲೆ ಶುರುವಾದ ಕಥೆ..ಅದ್ಭುತವಾಗಿ ಸಿನಿಮಾ ಬಂದಿದೆ. ಎರಡು ಸಿನಿಮಾ ಆದಾಗ ಎಲ್ಲರೂ ಒಳ್ಳೆ ಭವಿಷ್ಯವಿದೆ ಎನ್ನುವರು. ಆದರೆ ಆರಾಮ್ ಅರವಿಂದ್ ಸ್ವಾಮಿಯೇ ನನ್ನ ಭವಿಷ್ಯ. ಈ ಸಿನಿಮಾದಿಂದ ನನ್ನ ಭವಿಷ್ಯ ಶುರುವಾಗ್ತಿದೆ. ಸಿನಿಮಾಗೆ ಏನೂ ಬೇಕು ಎಲ್ಲವನ್ನೂ ನಿರ್ಮಾಪಕರು ಕೊಟ್ಟಿದ್ದಾರೆ. ಪಾತ್ರ ವರ್ಗ ಎಲ್ಲಾ ಅಭಿನಯವೂ ಚೆನ್ನಾಗಿದೆ ಎಂದರು.

ನಟಿ ಹೃತಿಕಾ ಶ್ರೀನಿವಾಸ್ ಮಾತನಾಡಿ, ಆರಾಮ್ ಅರವಿಂದ್ ಸ್ವಾಮಿ ನನ್ನ ಎರಡನೇ ಸಿನಿಮಾ. ನನ್ನ ಪಾತ್ರ ಬಹಳ ವಿಭಿನ್ನವಾಗಿದೆ. ನನ್ನ ಪಾತ್ರ ಕೇಳಿದಾಗಲೇ ಥ್ರಿಲ್ ಆಗಿದ್ದೇ. ಪ್ರಾಕ್ಟೀಸ್ ಮಾಡಿ, ಹರ್ಡ್ ವರ್ಕ್ ಪಾತ್ರ ಮಾಡಿದ್ದೇನೆ,. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿದ ಖುಷಿ ಇದೆ. ಆರಾಮ್ ಅರವಿಂದ್ ಸ್ವಾಮಿ ಒಂದೊಳ್ಳೆ ಸಿನಿಮಾ. ನಿಮ್ಮ ಬೆಂಬಲ ಚಿತ್ರದ ಮೇಲೆ ಇರಲಿ ಎಂದರು. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರ್ತಿದ್ದು, ‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನವಿದೆ. ‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ಅವರಿಗೆ ಆರಾಮ್ ಅರವಿಂದ್ ಸ್ವಾಮಿ ಮೂನರೇ ಸಿನಿಮಾ. ಈ ಚಿತ್ರದ ಮೂಲಕ ಅನೀಶ್ ತೇಜೇಶ್ವರ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಬೆಂಗಳೂರು, ಕೇರಳ, ಕನಕಪುರ, ಮೈಸೂರು ಭಾಗದಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮುಂದಿನ ತಿಂಗಳು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಲಿರುವ ಚಿತ್ರತಂಡ ಜನವರಿ ತಿಂಗಳಲ್ಲಿ ಸಿನಿಮಾವನ್ನು ತೆರೆಗೆ ತರಲಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಶುರುವಾಯಿತು ‘ವರಾಹಚಕ್ರಂ’ ಚಿತ್ರ!  ಮಾಜಿ ಸಚಿವ ಆರ್. ಅಶೋಕ್ ಚಾಲನೆ

ಶುರುವಾಯಿತು ‘ವರಾಹಚಕ್ರಂ’ ಚಿತ್ರ!  ಮಾಜಿ ಸಚಿವ ಆರ್. ಅಶೋಕ್ ಚಾಲನೆ

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.